ADVERTISEMENT

ಎಂಥಾ ಮಾತು: ಆರ್.ಅಶೋಕ-ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 23:32 IST
Last Updated 27 ಮಾರ್ಚ್ 2024, 23:32 IST
ಆರ್.ಅಶೋಕ, ಪ್ರತಿಪಕ್ಷ ನಾಯಕ
ಆರ್.ಅಶೋಕ, ಪ್ರತಿಪಕ್ಷ ನಾಯಕ   
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದಾಗ ಸೋನಿಯಾ ಗಾಂಧಿಗೆ ಹೊಡೆಯಿರಿ ಎನ್ನುತ್ತಿದ್ದರು. ಕಾಂಗ್ರೆಸ್‌ಗೆ ಹೋದ ಮೇಲೆ ಮೋದಿಗೆ ಹೊಡೆಯಿರಿ ಎನ್ನುತ್ತಿದ್ದಾರೆ. ಈ ರೀತಿ ಮಾತನಾಡುವ ಅವರಿಗೆ ಒಂದು ದಿನ ಜನರೇ ಹೊಡೆಯುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದ ಕಾಂಗ್ರೆಸ್‌ ನಾಯಕರು ಬುದ್ಧಿಭ್ರಮಣೆಯಿಂದ ಪ್ರಧಾನಿ ಮೋದಿಯವರ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ 
ಆರ್‌.ಅಶೋಕ, ವಿರೋಧ ಪಕ್ಷದ ನಾಯಕ
ರಾಜಕಾರಣದಲ್ಲಿ ಶತ್ರುತ್ವ ಶಾಶ್ವತವಲ್ಲ. ಸುಮಲತಾ ಅವರನ್ನು ಭೇಟಿಯಾಗಲು ಹಿಂಜರಿಕೆ ಇಲ್ಲ. ಅಂಬರೀಷ್‌ ಬದುಕಿದ್ದಾಗ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ಆಗ ಸುಮಲತಾ ಅವರೇ ನಮಗೆ ಊಟ ಬಡಿಸಿದ್ದಾರೆ. ರಾಜಕೀಯ ಸನ್ನಿವೇಶ, ಆಯಾ ಸಂದರ್ಭಗಳಲ್ಲಿ ಸಂಘರ್ಷವಾಗಿದೆ. ರಾಮಾಂಜನೇಯರ ನಡುವೆಯೇ ಯುದ್ಧ ನಡೆದಿತ್ತು. ಅವರ ಮುಂದೆ ನಾವೆಲ್ಲ ಹುಲು ಮಾನವರು
ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್‌ ಅಧ್ಯಕ್ಷ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.