ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 23:30 IST
Last Updated 13 ಏಪ್ರಿಲ್ 2024, 23:30 IST
ರಾಜನಾಥ್ ಸಿಂಗ್‌
ರಾಜನಾಥ್ ಸಿಂಗ್‌   

ಪ್ರತಿ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೂ ಭ್ರಷ್ಟಾಚಾರವು ಹೆಚ್ಚಳವಾಗಿದೆ. ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರ ಆರೋಪ ಕೇಳಿಬಂದಿಲ್ಲ. ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್‌ ಪಕ್ಷವು ಇಲ್ಲವಾಗಲಿದೆ. ಆ ಪಕ್ಷವು ಇನ್ನು ಕೆಲವು ವರ್ಷಗಳಲ್ಲಿ ಡೈನೋಸಾರ್‌ಗಳಂತೆ ಅಳಿದು ಹೋಗಲಿದೆ. ಕಾಂಗ್ರೆಸ್‌ ಪಕ್ಷವು ತುಕ್ಕು ಹಿಡಿದ ಕಬ್ಬಿಣದ ತುಂಡಿನಂತಾಗಿದೆ.

–ರಾಜನಾಥ್ ಸಿಂಗ್‌, ಕೇಂದ್ರ ಸಚಿವ

****

ADVERTISEMENT

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಕ್ಷೇತ್ರಗಳನ್ನೂ ಗೆಲ್ಲದು. ಆ ಪಕ್ಷವು ಉತ್ತರ ಬಂಗಾಳಕ್ಕೆ ಏನು ಕೊಡುಗೆ ನೀಡಿದೆ? ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಗಳಿಗೆ ಬಲಿಯಾಗಬೇಡಿ. ಅವು ಚುನಾವಣಾ ಜುಮ್ಲಾಗಳಾಗಿವೆ (ಸುಳ್ಳು). ಬಿ.ಆರ್‌. ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನವನ್ನು ಬಿಜೆಪಿಯು ನಾಶಮಾಡಿದೆ.

–ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ

ಮಮತಾ ಬ್ಯಾನರ್ಜಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.