ADVERTISEMENT

ಎಂಥಾ ಮಾತು: ಶಶಿ ತರೂರ್

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 19:14 IST
Last Updated 26 ಮಾರ್ಚ್ 2024, 19:14 IST
ಶಶಿ ತರೂರ್, ಕಾಂಗ್ರೆಸ್ ಮುಖಂಡ, ಸಂಸದ
ಶಶಿ ತರೂರ್, ಕಾಂಗ್ರೆಸ್ ಮುಖಂಡ, ಸಂಸದ   
ಪಕ್ಷದ ಖಾತೆಗಳು ಜಪ್ತಿಯಾಗಿರುವುದರಿಂದ ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ. ನಾವು ಬಯಸಿದ ರೀತಿಯಲ್ಲಿ ನಮ್ಮ ಬೆಂಬಲಕ್ಕೆ ನಿಲ್ಲಲು ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ. ನಿಷ್ಠಾವಂತ, ಕಠಿಣ ಪರಿಶ್ರಮದ ಕಾಂಗ್ರೆಸ್ ಕಾರ್ಯಕರ್ತರು ಎಲ್ಲೆಡೆ ಇದ್ದು, ತಮಗೆ ಸಾಧ್ಯವಾದದ್ದನ್ನು ಅವರು ಮಾಡುತ್ತಿದ್ದಾರೆ. ಸಾರ್ವಜನಿಕರಿಂದ ಹಣ ಸಂಗ್ರಹಿಸಲು ಚುನಾವಣಾ ಆಯೋಗವು ಅನುಮತಿ ನೀಡಿದಾಗ ನಾವು ಹಾಗೆ ಮಾಡುತ್ತೇವೆ. ಬಿಜೆಪಿ ಮತ್ತು ಸಿಪಿಎಂ ರೀತಿಯಲ್ಲಿ ಕಾರ್ಯಕರ್ತರಿಗೆ ಹಣ ಪೂರೈಸಲು ನಮ್ಮಿಂದ ಸಾಧ್ಯವಿಲ್ಲ. ಕೇರಳದ ಜನರಿಗೆ ಅದು ಗೊತ್ತಿದೆ. ಹಣ ಮತ್ತು ಪ್ರಚಾರಕ್ಕಿಂತ ಪ್ರಜಾಪ್ರಭುತ್ವ ಮುಖ್ಯ ಎಂಬುದನ್ನು ಅವರು ತಮ್ಮ ಮತಗಳ ಮೂಲಕ  ಸಾಬೀತುಪಡಿಸಲಿದ್ದಾರೆ.          
-ಶಶಿ ತರೂರ್, ಕಾಂಗ್ರೆಸ್ ಮುಖಂಡ, ಸಂಸದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.