ADVERTISEMENT

ಒಡಿಶಾ: ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2014, 19:30 IST
Last Updated 4 ಏಪ್ರಿಲ್ 2014, 19:30 IST

ಭುವನೇಶ್ವರ (ಐಎಎನ್‌ಎಸ್‌): ಒಡಿಶಾದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ, ರೈತರಿಗೆ ಉಚಿತ ವಿದ್ಯುತ್‌ ಹಾಗೂ ₨25,000 ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ನೋಂದಣಿ ಮಾಡಿ­ರುವ ನಿರು­ದ್ಯೋಗಿ ಯುವಕರಿಗೆ ಐದು ವರ್ಷಗಳ­ವರೆಗೆ ಮಾಸಿಕ ಭತ್ಯೆ, ಬಡತನ ರೇಖೆ­ಗಿಂತ ಕೆಳಗಿನ ಕುಟುಂಬಕ್ಕೆ ಸೇರಿದ ಶಿಕ್ಷಿತ ಯುವಜನರಿಗೆ ಒಂದು ಲಕ್ಷ ರೂಪಾಯಿ­ವರೆಗೆ ಬಡ್ಡಿ ರಹಿತ ಸಾಲ ನೀಡುವ ಭರವಸೆಯನ್ನೂ ಕಾಂಗ್ರೆಸ್‌ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.