ಬೆಂಗಳೂರು: ಮಹದಾಯಿ ಉತ್ತರ ಕರ್ನಾಟಕದ ಸಮಸ್ಯೆ, ದಕ್ಷಿಣದವರು ಪ್ರತಿಭಟಿಸುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರು ಹೇಳಿದ್ದು ಚರ್ಚೆಗಾಸ್ಪದವಾಗಿದ್ದು, ಸಾಮಾಜಿಕ ತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿತ್ತು.
ಆದರೆ ತಾನು ಆ ರೀತಿ ಹೇಳಿಲ್ಲ ಎಂದ ಸದಾನಂದ ಗೌಡರು " ಮಹದಾಯಿ ಉತ್ತರ ಕರ್ನಾಟಕದ ಗಂಭೀರ ಸಮಸ್ಯೆ "ಎಲ್ಲರೂ ಒಟ್ಟಾಗಿ ಸೇರಿ ಬಗೆಹರಿಸುವ ಅಗತ್ಯವಿದೆ ಎಂಬ ನನ್ನ ಹೇಳಿಕೆಯನ್ನು ತಿರುಚಲಾಗಿದೆ , ಸುಳ್ಳು ಹಬ್ಬಿಸಿ ಜನರನ್ನು ಗೊಂದಲಕ್ಕೆ ತಳ್ಳುವ ಕಿಡಿಗೇಡಿಗಳಿಗೆ ಇದೊಂದು ಉದ್ಯೋಗವಾಗಿ ಬಿಟ್ಟಿದೆ ಎಂದು ಟ್ವೀಟಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.