ADVERTISEMENT

ಕೇಜ್ರಿವಾಲ್‌ಗೆ ಮೌಲ್ವಿಗಳ ಬೆಂಬಲ

​ಪ್ರಜಾವಾಣಿ ವಾರ್ತೆ
Published 11 ಮೇ 2014, 19:30 IST
Last Updated 11 ಮೇ 2014, 19:30 IST

ವಾರಾಣಸಿ (ಪಿಟಿಐ): ಮತದಾನಕ್ಕೆ ಒಂದು ದಿನ ಇರುವಾಗ (ಮೇ 11) ಇಲ್ಲಿನ ಮೌಲ್ವಿಗಳು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರಾದ ಈ ಕ್ಷೇತ್ರದಿಂದ ಉಮೇದುವಾರಿಕೆ ಮಾಡಿರುವ ಅರವಿಂದ ಕೇಜ್ರಿವಾಲ್‌ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಈ ಸಾರಿ ಲೋಕಸಭಾ ಚುನಾವ­ಣೆಯಲ್ಲಿ ಎಎಪಿ ಅಭ್ಯರ್ಥಿಯನ್ನು ಬೆಂಬಲಿಸಲು ಭಾನುವಾರ ನಡೆದ ಮುಫ್ತಿ ಮಂಡಳಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಂಡಳಿಯ ಹೇಳಿಕೆ ತಿಳಿಸಿದೆ.

ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಸುಮಾರು 16 ಲಕ್ಷ ಮತದಾರರು ಇದ್ದಾರೆ. ಇವರಲ್ಲಿ ಶೇ 18ರಷ್ಟು ಮುಸ್ಲಿಮರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.