ADVERTISEMENT

ಜೆಡಿಯುಗೆ ವಿದಾಯ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2014, 19:30 IST
Last Updated 21 ಮಾರ್ಚ್ 2014, 19:30 IST

ನವದೆಹಲಿ (ಪಿಟಿಐ): ಜೆಡಿಯುನ ರಾಜ್ಯಸಭಾ ಸದಸ್ಯ ಎನ್‌.ಕೆ.ಸಿಂಗ್‌ ಅವರು ಶುಕ್ರವಾರ ಪಕ್ಷಕ್ಕೆ ರಾಜೀ­ನಾಮೆ ನೀಡಿದ್ದಾರೆ.
‘ಬಿಜೆಪಿ ಜತೆ ಮೈತ್ರಿ ಕಡಿದುಕೊಂಡ ನಂತರ ರಾಜ್ಯದಲ್ಲಿ ಅಭಿವೃದ್ಧಿ ವಿಚಾರ ಹಿಂದೆ ಸರಿದಿದೆ.

ಬದಲಾಗಿ, ರಾಜಕೀಯ ಉಳಿವಿಗಾಗಿಯೇ ಸರ್ಕಾರ ಒತ್ತು ನಿಡುತ್ತಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ರಾಜೀನಾಮೆ ಕುರಿತು ಮುಖ್ಯ­ಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಪತ್ರ ಬರೆದ ಸಿಂಗ್‌, ಸದ್ಯದಲ್ಲಿಯೇ ಬಿಜೆಪಿ ಸೇರುವ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.