ನವದೆಹಲಿ (ಪಿಟಿಐ): ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೀಡಿರುವ ಷೋಕಾಸ್ ನೋಟಿಸ್ಗೆ ಉತ್ತರಿಸುವ ಗಡುವನ್ನು ಚುನಾವಣಾ ಆಯೋಗ ಮೂರು ದಿನಗಳ ಕಾಲ ವಿಸ್ತರಿಸಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂಸಾಚಾರ ನಡೆಯುತ್ತದೆ. ಇದರಿಂದ 22 ಸಾವಿರ ಜನರು ಹತ್ಯೆಗೀಡಾಗುತ್ತಾರೆ ಎಂಬ ರಾಹುಲ್ ಅವರ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಇದೇ 9ರಂದು ನೋಟಿಸ್ ನೀಡಿದ್ದ ಚುನಾವಣಾ ಆಯೋಗ, ಸೋಮವಾರ ಬೆಳಿಗ್ಗೆಯ ಹೊತ್ತಿಗೆ ಇದಕ್ಕೆ ಪ್ರತಿಕ್ರಿಯಿಸುವಂತೆ ಸೂಚಿಸಿತ್ತು. ಹಿಮಾಚಲ ಪ್ರದೇಶದ ಸೋಲಾನ್ನಲ್ಲಿ ಮೇ 1ರಂದು ನಡೆದ ರ್ಯಾಲಿಯಲ್ಲಿ ರಾಹುಲ್ ಅವರು ಈ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.