ADVERTISEMENT

ಬಿಜೆಪಿ ಸಿಇಸಿ ಸಭೆಯಲ್ಲಿ ವಾರಾಣಸಿ ವಿವಾದ ಪ್ರತಿಧ್ವನಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2014, 19:30 IST
Last Updated 8 ಮಾರ್ಚ್ 2014, 19:30 IST

ನವದೆಹಲಿ (ಪಿಟಿಐ): ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಯಾರು ಸ್ಪರ್ಧಿಸಬೇಕು ಎಂಬ ಬಗ್ಗೆ ಉಂಟಾಗಿರುವ ವಿವಾದ ಶನಿವಾರ ನಡೆದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರತಿಧ್ವನಿಸಿತು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖಂಡರ ನಡುವೆ ವಾಗ್ವಾದ ನಡೆಯಿತು.ವಾರಾಣಸಿ ಕ್ಷೇತ್ರದಲ್ಲಿ ಹಿರಿಯ ಮುಖಂಡ ಮುರಳಿ ಮನೋಹರ ಜೋಶಿ ಅವರ ಜಾಗದಲ್ಲಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸ್ಪರ್ಧಿಸುತ್ತಾರೆಯೇ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಕೆಲವು ಸದಸ್ಯರು ಒತ್ತಾಯಿ­ಸಿ­ದರು ಎಂದು ಮೂಲಗಳು ಹೇಳಿವೆ.ಸ್ಪಷ್ಟನೆ ಕೇಳಿದವರಲ್ಲಿ ಸ್ವತಃ ಜೋಶಿ ಹಾಗೂ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ಅವರು ಸೇರಿದ್ದಾರೆ ಎಂದು ಹೇಳಲಾಗಿದೆ.

‘ಕಳಂಕಿತ' ನಾಯಕರು ಎನ್‌ಡಿಎಗೆ ಸೇರ್ಪಡೆಗೊಳ್ಳುವ ವಿಚಾರವನ್ನೂ ಸುಷ್ಮಾ ಅವರು ಸಭೆಯಲ್ಲಿ ಪ್ರಸ್ತಾಪಿಸಿ­ದರು ಎಂದೂ ಮೂಲಗಳು ಹೇಳಿದೆ. ತಾವು ಪ್ರತಿನಿಧಿಸುವ ವಾರಾಣಸಿ­ಯಿಂದ ಮೋದಿ ಅವರೇ ಸ್ಪರ್ಧಿಸಬೇಕು ಎಂದು ಪಕ್ಷದ ಕೆಲವರು ಒತ್ತಡ ಹಾಕು­ತ್ತಿರುವ ಬಗ್ಗೆ ಜೋಶಿ ಅವರು ಅಸಮಾಧಾನ­ಗೊಂಡಿದ್ದಾರೆ ಎಂದು ವರದಿಯಾಗಿದೆ.

ನರೇಂದ್ರ ಮೋದಿ ಅವರು ವಾರಾಣಸಿಯಿಂದಲೇ ಸ್ಪರ್ಧಿಸಬೇಕೆಂದು ಶುಕ್ರವಾರ ಪಕ್ಷದ ಕಾರ್ಯಕರ್ತರು ಸಹಿ ಸಂಗ್ರಹಣಾ ಅಭಿಯಾನ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.