
ಪ್ರಜಾವಾಣಿ ವಾರ್ತೆ
ನವದೆಹಲಿ: ವಡೋದರ ಕ್ಷೇತ್ರದಲ್ಲಿ ಜಯಗಳಿಸಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಮೂಲಕ ಪ್ರಧಾನಿ ಡಾ. ಮನಮೋಹನ್ ಸಿಂಗ್ ಶುಕ್ರವಾರ ಅಭಿನಂದನೆ ತಿಳಿಸಿದ್ದಾರೆ.
ನಾಳೆ ಸಿಂಗ್ ರಾಜೀನಾಮೆ : ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಗೆಲುವು ಕಂಡ ಹಿನ್ನೆಲೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಶನಿವಾರ ಮಧ್ಯಾಹ್ನ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜೀನಾಮೆ ಸಲ್ಲಿಸಿದ ಬಳಿಕ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.