ನವದೆಹಲಿ (ಐಎಎನ್ಎಸ್): ವಾರಾಣಸಿ ಲೋಕಸಭೆ ಕ್ಷೇತ್ರದ ಚುನಾವಣಾ ಫಲಿತಾಂಶ ತಡೆ ಹಿಡಿಯಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಮಂಗಳವಾರ ನಿರಾಕರಿಸಿದೆ.
ನರೇಂದ್ರ ಮೋದಿ ಈ ಕ್ಷೇತ್ರದ ನಿವಾಸಿಯಲ್ಲ. ಅಲ್ಲದೇ ಅವರು ಇನ್ನೊಂದು ಕ್ಷೇತ್ರದಿಂದಲೂ ಸ್ಪರ್ಧಿಸಿದ್ದಾರೆ. ಹೀಗಾಗಿ ವಾರಾಣಸಿ ಫಲಿತಾಂಶ ತಡೆಹಿಡಿಯಬೇಕೆಂದು ಕೋರಿ ವಕೀಲರಾದ ಲಿಲ್ಲಿ ಥಾಮಸ್ ಅರ್ಜಿ ಸಲ್ಲಿಸಿದ್ದರು.
‘ಅರ್ಜಿ ಸಲ್ಲಿಕೆ ತುಂಬಾ ವಿಳಂಬವಾಗಿರುವ ಕಾರಣ ಈ ಹಂತದಲ್ಲಿ ವಿಚಾರಣೆ ಸಾಧ್ಯವಿಲ್ಲ’ ಎಂದು ಸುಪ್ರೀಂಕೋರ್ಟ್ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.