ನವದೆಹಲಿ (ಪಿಟಿಐ): ತಾವು ‘ಹೊರಗಿನವರು’ ಎನ್ನುವ ಗುಲ್ಲೆಬ್ಬಿಸಿರುವ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿಗೆ ತಿರುಗೇಟು ನೀಡಿರುವ ಪಂಜಾಬ್ನ ಅಮೃತಸರದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಜೇಟ್ಲಿ, ‘ನಿಮ್ಮ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಭಾರತದ ಯಾವ ರಾಜ್ಯಕ್ಕೆ ಸೇರಿದವರು’ ಎಂದು ಪ್ರಶ್ನಿಸಿದ್ದಾರೆ.
‘ನಮ್ಮ ಪೂರ್ವಿಕರು ಪಂಜಾಬ್ನೊಂದಿಗೆ ಹೊಂದಿರುವ ನಿಕಟ ಸಂಪರ್ಕದ ಹೊರತಾಗಿಯೂ ನನ್ನನ್ನು ‘ಹೊರಗಿನವ’
ಹಾಗೂ ‘ನಕಲಿ ಪಂಜಾಬಿ’ ಎಂದು ಕರೆಯುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಸೋನಿಯಾ ಮೂಲದ ಬಗ್ಗೆ ಮಾತನಾಡಲಿ’ ಎಂದು ಕಿಡಿಕಾರಿದ್ದಾರೆ.
‘ಚುನಾವಣೆಯಲ್ಲಿ ಗೆದ್ದ ನಂತರ ಅಮೃತಸರದಲ್ಲಿ ಕಚೇರಿ ತೆರೆದು ಅಲ್ಲಿಯೇ ಮನೆ ಮಾಡುವೆ’ ಎಂದು ಜೇಟ್ಲಿ ಭರವಸೆ ನೀಡಿದರು.
ಪಂಜಾಬ್ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಕಾಂಗ್ರೆಸ್, ಜೇಟ್ಲಿ ವಿರುದ್ಧ ಕಣಕ್ಕೆ ಇಳಿಸಿರುವುದರಿಂದ ಈ ಕ್ಷೇತ್ರ ಕುತೂಹಲ ಮೂಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.