ADVERTISEMENT

Video | ಈ ಚುನಾವಣೆ ಎರಡು ಸಿದ್ಧಾಂತಗಳ ನಡುವಣ ಹೋರಾಟ: ರಾಹುಲ್‌ ಗಾಂಧಿ

ಪ್ರಜಾವಾಣಿ ವಿಶೇಷ
Published 17 ಏಪ್ರಿಲ್ 2024, 15:57 IST
Last Updated 17 ಏಪ್ರಿಲ್ 2024, 15:57 IST

‘ಈ ಲೋಕಸಭಾ ಚುನಾವಣೆಯು ಎರಡು ಸಿದ್ಧಾಂತಗಳ ನಡುವಣ ಹೋರಾಟವಾಗಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು. ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಬುಧವಾರ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಇಂಡಿಯಾ ಒಕ್ಕೂಟವು ಸಂವಿಧಾನಕ್ಕಾಗಿ ಹೋರಾಡುತ್ತಿದ್ದರೆ, ಬಿಜೆಪಿಯು ಸಂವಿಧಾನ ಮತ್ತು ಪ್ರಜಾಪ್ರಭುತ್ವ ನಾಶಗೊಳಿಸಲು ಹೋರಾಡುತ್ತಿದೆ’ ಎಂದು ಟೀಕಿಸಿದರು. ‘ಬಿಜೆಪಿಯು 20ರಿಂದ 25 ಜನ ಶ್ರೀಮಂತರಿಗೆ ಸೇರಿದ್ದಾಗಿದೆ. ಕಾಂಗ್ರೆಸ್‌ಗೆ ನೀವು ಅಧಿಕಾರ ನೀಡಿದರೆ ಜನಸಾಮಾನ್ಯರಿಗಾಗಿ, ರೈತರಿಗಾಗಿ, ಕಾರ್ಮಿಕರಿಗಾಗಿ ಕೆಲಸ ಮಾಡಲಿದೆ’ ಎಂದು ರಾಹುಲ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.