ಶಿವಮೊಗ್ಗ: ಕಾಂಗ್ರೆಸ್ನಲ್ಲಿ ಟಿಕೆಟ್ ಗೊಂದಲ ಇನ್ನೂ ಮುಂದುವರಿದಿದೆ. ಬಂಗಾರಪ್ಪ ಅವರ ಹಿರಿಯ ಮಗ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ಹಾಗೂ ಎಐಸಿಸಿ ಸದಸ್ಯ, ಉದ್ಯಮಿ ಮಂಜುನಾಥ ಭಂಡಾರಿ ಟಿಕೆಟ್ ಆಕಾಂಕ್ಷಿಗಳು.
ಆದರೆ ಬಿಜೆಪಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೈಪೋಟಿ ನೀಡಲು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರೇ ಸೂಕ್ತ ಅಭ್ಯರ್ಥಿ ಎಂದು ಪಕ್ಷದ ಒಂದು ವಲಯ ಹೈಕಮಾಂಡ್ ಮೇಲೆ ಒತ್ತಡ ಹಾಕಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.