ದಾವಣಗೆರೆ: ‘ಕಾಂಗ್ರೆಸ್ನಲ್ಲಿ ಗುಲಾಮಗಿರಿ ಸಂಸ್ಕೃತಿ ಇನ್ನೂ ಜೀವಂತವಾಗಿದ್ದು, ಎಲ್ಲದಕ್ಕೂ ವರಿಷ್ಠರ ಮನೆಯ ಬಾಗಿಲು ಕಾಯುವ ಪರಿಸ್ಥಿತಿಯಿದೆ’ ಎಂದು ಜೆಡಿಎಸ್ ಅಭ್ಯರ್ಥಿ ಮಹಿಮ ಪಟೇಲ್ ಆಪಾದಿಸಿದರು.
ಕಾಂಗ್ರೆಸ್ನಿಂದ ಜೆಡಿಎಸ್ ಸೇರಿ ಆ ಪಕ್ಷದಿಂದ ಚುನಾವಣೆಗೆ ಬಿ–ಫಾರಂ ಪಡೆದ ಮಹಿಮ ಭಾನುವಾರ ನಗರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
‘ಜೆಡಿಎಸ್ನದ್ದು ಕುಟುಂಬ ರಾಜಕಾರಣ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ. ನಮ್ಮದು ಕುಟುಂಬ ರಾಜಕಾರಣವೇ. ಇಡೀ ರಾಜ್ಯವನ್ನು ಎಚ್.ಡಿ.ಕುಮಾರಸ್ವಾಮಿ ಒಟ್ಟಾಗಿ ತೆಗೆದುಕೊಂಡು ಹೋಗುವ ಮೂಲಕ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು. ‘ಈ ಚುನಾವಣೆಯಲ್ಲಿ ಹಣ, ಜಾತಿ ಬಲ ನಡೆಯುವುದಿಲ್ಲ. ಹಣ ಕೊಟ್ಟು ಮತದಾರರ ಖರೀದಿ ಮಾಡಲು ಅಸಾಧ್ಯ. ರಾಜ್ಯದಲ್ಲಿ ಜೆಡಿಎಸ್ ಸುಂಟರಗಾಳಿಗೆ ಕಾಂಗ್ರೆಸ್, ಬಿಜೆಪಿ ಹಾರಿ ಹೋಗಲಿವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.