ರಾಮನಗರ: ‘ಹತ್ತೂವರೆ ತಿಂಗಳು ದೇಶದ ಪ್ರಧಾನಿಯಾಗಿ ಕಳಂಕ ರಹಿತ ಆಡಳಿತ ನೀಡಿರುವ ನಾನು ಅಕ್ರಮವಾಗಿ ಆಸ್ತಿ ಸಂಪಾದಿಸಿರುವುದು ಕಂಡು ಬಂದರೆ ರಾಜ್ಯ ಸರ್ಕಾರ ಸಿಬಿಐ ತನಿಖೆ ನಡೆಸಲಿ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸವಾಲು ಹಾಕಿದರು.
ಭಾನುವಾರ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ನನ್ನ ಮನೆಯಲ್ಲೇ ಬೆಳೆದ ಸಿ.ಎಂ ಸಿದ್ದರಾಮಯ್ಯ ಅವರು ನನ್ನ ವಿರುದ್ಧವೇ ಗರ್ವದಿಂದ ಲಘುವಾಗಿ ಮಾತನಾಡುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.