ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಅವರು ಜಯ ಗಳಿಸಿದ್ದಾರೆ. ಎರಡನೇ ಪ್ರಾಶಸ್ತ್ಯದ ಮತಗಳ ಬೆಂಬಲದಿಂದ ಅವರು ಈ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಈ ಕ್ಷೇತ್ರದ ಟಿಕೆಟ್ ಅವರಿಗೇ ದೊರೆಯುವುದು ಖಚಿತವಾದಂತಾಗಿದೆ.
ಒಟ್ಟು ನಾಲ್ವರು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಈ ಪೈಕಿ ಕೆಪಿಸಿಸಿ ಕಾರ್ಯದರ್ಶಿ ಜಿ.ಸಿ.ಚಂದ್ರಶೇಖರ್ 123 ಮತ ಪಡೆದು ಎರಡನೇ ಸ್ಥಾನ ಗಳಿಸಿದರು. ಎಐಸಿಸಿ ವಕ್ತಾರ ಎಂ.ವಿ.ರಾಜೀವ್ ಗೌಡ 69 ಮತ್ತು ಮಾಜಿ ಶಾಸಕ ನೆ.ಲ.ನರೇಂದ್ರಬಾಬು 40.5 ಮತ ಪಡೆಯುವ ಮೂಲಕ ಅನುಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.
ಇಲ್ಲಿನ ಆರ್.ಟಿ.ನಗರದಲ್ಲಿರುವ ಪಟೇಲ್ಸ್ ಇನ್ ಖಾಸಗಿ ರೆಸಾರ್ಟ್ನಲ್ಲಿ ಗುರುವಾರ ಬೆಳಿಗ್ಗೆ ಕಾಂಗ್ರೆಸ್ನ ಆಂತರಿಕ ಚುನಾವಣೆ ನಡೆಯಿತು. ಎಐಸಿಸಿ ನಿಯೋಜಿಸಿದ್ದ ಚುನಾವಣಾಧಿಕಾರಿಗಳಾದ ಜಸ್ಪ್ರೀತ್ ಸಿಂಗ್ ಮತ್ತು ನಿತಿನ್ ಕುಂಭಾಲ್ಕರ್ ನೇತೃತ್ವದಲ್ಲಿ ಚುನಾವಣೆ ನಡೆಯಿತು.
ಆರಂಭದಲ್ಲಿ ಎಲ್ಲ ಅಭ್ಯರ್ಥಿಗಳೂ ತಲಾ ಹತ್ತು ನಿಮಿಷಗಳ ಕಾಲ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನಂತರ ಮತದಾನ ಶುರುವಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.