ADVERTISEMENT

ಚಿಕ್ಕಬಳ್ಳಾಪುರ: ಡಾ.ಅಂಜನಪ್ಪ ಕೆಆರ್‌ಎಸ್‌ ಪಕ್ಷದ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2024, 16:31 IST
Last Updated 23 ಮಾರ್ಚ್ 2024, 16:31 IST
ಬೆಂಗಳೂರಿನಲ್ಲಿ ಶನಿವಾರ ವೈದ್ಯ ಟಿ.ಎಚ್‌.ಆಂಜನಪ್ಪ ಅವರು ಕೆಆರ್‌ಎಸ್‌ ಪಕ್ಷ ಸೇರಿದರು. ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ, ಉಪಾಧ್ಯಕ್ಷ ಲಿಂಗೇಗೌಡ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಶನಿವಾರ ವೈದ್ಯ ಟಿ.ಎಚ್‌.ಆಂಜನಪ್ಪ ಅವರು ಕೆಆರ್‌ಎಸ್‌ ಪಕ್ಷ ಸೇರಿದರು. ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ, ಉಪಾಧ್ಯಕ್ಷ ಲಿಂಗೇಗೌಡ ಉಪಸ್ಥಿತರಿದ್ದರು.   

ಬೆಂಗಳೂರು: ಹೆಸರಾಂತ ವೈದ್ಯ ಡಾ.ಟಿ.ಎಚ್‌.ಆಂಜನಪ್ಪ ಅವರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ  ಕಣಕ್ಕೆ ಇಳಿಯಲಿದ್ದಾರೆ.

‘ಜನಸಾಮಾನ್ಯರಿಗೆ ಆಡುಭಾಷೆಯಲ್ಲಿ ವೈದ್ಯಕೀಯ ಮಾಹಿತಿಗಳನ್ನು ತಿಳಿಸುವ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಆಂಜನಪ್ಪ ಅವರು ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿದ್ದಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅವರಿಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್‌ ನೀಡಲಾಗಿದೆ’ ಎಂದು ಕೆಆರ್‌ಎಸ್‌ಪಿ ಉಪಾಧ್ಯಕ್ಷ ಲಿಂಗೇಗೌಡ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT