ADVERTISEMENT

ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2024, 12:26 IST
Last Updated 24 ಮಾರ್ಚ್ 2024, 12:26 IST
<div class="paragraphs"><p>ಜನಾರ್ದನ ರೆಡ್ಡಿ</p></div>

ಜನಾರ್ದನ ರೆಡ್ಡಿ

   

ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ)ದ ಸ್ಥಾಪಕ, ಶಾಸಕ ಜನಾರ್ದನ ರೆಡ್ಡಿ ಅವರು ಸೋಮವಾರ (ಮಾರ್ಚ್‌ 25) ಬಿಜೆಪಿ ಸೇರಲಿದ್ದಾರೆ. 

ಮುಂದಿನ ರಾಜಕೀಯ ನಡೆ ಕುರಿತು ಚರ್ಚಿಸಲು ಜನಾರ್ದನ ರೆಡ್ಡಿ ಅವರು ಭಾನುವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರ ಸಭೆ ಕರೆದಿದ್ದರು. ‘ಬಿಜೆಪಿ ಸೇರುವ ಕುರಿತು ಈ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು‘ ಎಂದು ಕೆಆರ್‌ಪಿಪಿ ಪಕ್ಷದ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ದಮ್ಮೂರು ರಾಜಶೇಖರ್‌ ಪ್ರಜಾವಾಣಿಗೆ ತಿಳಿಸಿದರು.

ADVERTISEMENT

ಸೋಮವಾರ ಬೆಳಗ್ಗೆ 10 ಗಂಟೆಗೆ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರಲಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಜನಾರ್ದನ ರೆಡ್ಡಿ ಇತ್ತೀಚೆಗಷ್ಟೇ ದೆಹಲಿಯಲ್ಲಿ ಭೇಟಿಯಾಗಿ ಬಂದಿದ್ದರು. ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಹೈಕಮಾಂಡ್‌ಗೆ ತಮ್ಮ ಅಭಿಪ್ರಾಯ ತಿಳಿಸಿರುವುದಾಗಿ ಬಳ್ಳಾರಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರು ಹಲವು ಬಾರಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.