ADVERTISEMENT

ಜಗದೀಶ್‌ ಶೆಟ್ಟರ್‌ ಸೋಲು: ಕ್ಷೇತ್ರದ ಉಸ್ತುವಾರಿ ರಜತ್ ಉಳ್ಳಾಗಡ್ಡಿಮಠ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 13 ಮೇ 2023, 9:25 IST
Last Updated 13 ಮೇ 2023, 9:25 IST
   

ಹುಬ್ಬಳ್ಳಿ: ಹು-ಧಾ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ಸೋಲು ಖಚಿತವಾಗುತ್ತಿದ್ದಂತೆ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಸೆಂಟ್ರಲ್ ಕ್ಷೇತ್ರದ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ರಜತ್ ಉಳ್ಳಾಗಡ್ಡಿಮಠ ರಾಜೀನಾಮೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಜತ್, ' ಕಳೆದ ಮೂರ್ನಾಲ್ಕು ವರ್ಷಗಳಿಂದ ಸೆಂಟ್ರಲ್ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಮಾಡಿದ್ದೆವು. ಕಾರ್ಯಕರ್ತರು ಹಗಲಿರುಳು ಶೆಟ್ಟರ್ ಪರವಾಗಿ‌ ಕೆಲಸ ಮಾಡಿದ್ದರು. ಸೆಂಟ್ರಲ್ ಕ್ಷೇತ್ರದಲ್ಲಿ ಜನಾದೇಶ ನಮ್ಮ ವಿರುದ್ಧ ಬಂದಿದೆ. ಅದನ್ನು ಸ್ವೀಕರಿಸುತ್ತೇವೆ. ಈ ಫಲಿತಾಂಶದಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬದಲಿದೆ. ಕ್ಷೇತ್ರದಲ್ಲಿ ಜನರ ಪರವಾಗಿ ಕೆಲಸ ಮಾಡಿ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಹೇಳಿದರು.

ADVERTISEMENT

ಬೂತ್ ಮಟ್ಟದಲ್ಲಿ ಎಲ್ಲಿ ಹಿನ್ನಡೆ ಆಗಿದೆ, ಸೋಲಿಗೆ ಕಾರಣ ಏನು ಎಂದು ಆತ್ಮಾವಲೋಕ ಮಾಡಿಕೊಳ್ಳುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.