ADVERTISEMENT

ಏಕೆ ಚಡಪಡಿಸುತ್ತಿದ್ದೀಯಾ ಅಣ್ಣಾ? ಸವದಿಗೆ ಶಾಸಕ ರಮೇಶ ಜಾರಕಿಹೊಳಿ ಟಾಂಗ್‌

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2023, 11:29 IST
Last Updated 9 ಏಪ್ರಿಲ್ 2023, 11:29 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಳಗಾವಿ: ‘ಸೋಲು, ಗೆಲುವು ದೇವರ ಇಚ್ಛೆ. ಲಕ್ಷ್ಮಣ ಸವದಿ ಏಕೆ ಹತಾಶರಾಗಿ ಮಾತನಾಡುತ್ತಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಹೆಮ್ಮರವಾಗಿದ್ದಾರೆ. ಅವರ ಮುಂದೆ ನಾನು ಮತ್ತು ಸವದಿ ಒಂದು ಗಿಡದ ತಪ್ಪಲಷ್ಟೇ. ಅಥಣಿ ಟಿಕೆಟ್‌ ಬಗ್ಗೆ ನಾಯಕರೇ ನಿರ್ಣಯ ತೆಗೆದುಕೊಳ್ಳಲಿದ್ದಾರೆ. ಏಕೆ ಇಷ್ಟು ಚಡಪಡಿಸುತ್ತಿದ್ದೀಯಾ? ಲಕ್ಷ್ಮಣ ಅಣ್ಣಾ, ಆರಾಮಾಗಿರು...’ ಎಂದು ಶಾಸಕ ರಮೇಶ ಜಾರಕಿಹೊಳಿ ತಿವಿದರು.

‘ಅಥಣಿ ಕ್ಷೇತ್ರದಲ್ಲಿ ಶಾಸಕ ಮಹೇಶ ಕುಮಠಳ್ಳಿ ಸೋತರೆ, ಆ ಹಣೆಪಟ್ಟಿ ನನಗೆ ಕಟ್ಟಲು ಷಡ್ಯಂತ್ರ ನಡೆದಿದೆ’ ಎಂಬ ವಿಧಾನ ಪರಿಷತ್‌ ಲಕ್ಷ್ಮಣ ಸವದಿ ಹೇಳಿಕೆಗೆ, ಮಹಾರಾಷ್ಟ್ರದ ಶಿನೋಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಮಹೇಶ ಕುಮಠಳ್ಳಿ ಮತ್ತು ಲಕ್ಷ್ಮಣ ಸವದಿ ಅವರ ಮಧ್ಯೆ ಪೈಪೋಟಿ ಏರ್ಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ರಮೇಶ, ‘ಕೆಲ ವಿಷಯಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಮಹೇಶ ಕುಮಠಳ್ಳಿ ಸೇರಿದಂತೆ 17 ಶಾಸಕರಿಗೆ ಎಲ್ಲರಿಗೂ ಟಿಕೆಟ್‌ ಸಿಗಲಿದೆ’ ಎಂದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.