ಮೈಸೂರು: ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ಇಲ್ಲಿ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ. ಕರ್ನಾಟಕದ ಒಳಿತಿಗಾಗಿ ತಮ್ಮ ತಂದೆ ಮತ್ತೆ ಮುಖ್ಯಮಂತ್ರಿಯಾಗಬೇಕು‘ ಎಂದು ಅವರು ಹೇಳಿದರು.
‘ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ನಾವು ಎಲ್ಲಾ ಪ್ರಯತ್ನಗಳನನ್ನು ಮಾಡಲಿದ್ದೇವೆ. ರಾಜ್ಯದ ಒಳಿತಿಗಾಗಿ ನನ್ನ ತಂದೆ ಮುಖ್ಯಮಂತ್ರಿಯಾಗಬೇಕು. ವರುಣಾದಲ್ಲಿ ತಂದೆಯವರು ಗೆಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ. ನಮ್ಮದೇ ಸರ್ಕಾರ ರಚನೆಯಾಗಲಿದೆ‘ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
‘ಒಬ್ಬ ಮಗನಾಗಿ, ತಂದೆಯವರು ಮುಖ್ಯಮಂತ್ರಿಯಾಗುವುದನ್ನು ನಾನು ಬಯಸುತ್ತೇನೆ. ರಾಜ್ಯದ ಒಬ್ಬ ಪ್ರಜೆಯಾಗಿ ಹೇಳುವುದಾದರೆ, ಅವರು ಮುಖ್ಯಮಂತ್ರಿಯಾಗಿ ಈ ಹಿಂದೆ ಮಾಡಿದ ಆಡಳಿತ ಚೆನ್ನಾಗಿತ್ತು. ಒಂದು ವೇಳೆ ಅವರು ಮತ್ತೆ ಮುಖ್ಯಮಂತ್ರಿಯಾದರೆ, ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರವನ್ನು ಅವರು ಸರಿಪಡಿಸಲಿದ್ದಾರೆ. ರಾಜ್ಯದ ಒಳಿತಿಗಾಗಿ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು‘ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.