ADVERTISEMENT

Video| ಕಾಂಗ್ರೆಸ್‌ಗೆ ಮುನ್ನಡೆ: ಕಾರ್ಯಕರ್ತರಿಗೆ ‘ಥಂಬ್ಸ್‌ ಅಪ್‌‘ ಮಾಡಿದ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಮೇ 2023, 5:35 IST
Last Updated 13 ಮೇ 2023, 5:35 IST
   

ಬೆಂಗಳೂರು: ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ. ಈ ಸಂಭ್ರಮವನ್ನು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ಕಾರ್ಯಕರ್ತರೊಂದಿದೆ ಆಚರಿಸಿದ್ದಾರೆ.

ಈ ವಿಡಿಯೊವನ್ನು ಎನ್‌ಎನ್‌ಐ ಟ್ವೀಟ್‌ ಮಾಡಿದೆ.

ಮೈಸೂರಿನ ಮಹಾರಾಣಿ ವಾಣಿಜ್ಯ ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದರು. ಮತ ಎಣಿಕೆಯ ಪ್ರಕ್ರಿಯೆಯನ್ನು ವೀಕ್ಷಿಸಿದರು.

ADVERTISEMENT

ಬಳಿಕ ಕಾರ್ಯಕರ್ತರ ಮುಂದೆ ಆಗಮಿಸಿದ ಅವರು, ಹೆಬ್ಬೆರಳು ತೋರಿ ಖುಷಿ ಹಂಚಿಕೊಂಡರು.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ 11 ಗಂಟೆ ವೇಳೆಗೆ ಕಾಂಗ್ರೆಸ್‌ 114 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 73 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, ಜೆಡಿಎಸ್‌ 30 ಸೀಟುಗಳಲ್ಲಿ ಮುಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.