ADVERTISEMENT

ಬಜರಂಗದಳವನ್ನು ನಿಷೇಧಿಸುವ ಶಕ್ತಿಯನ್ನು ಕಾಂಗ್ರೆಸ್‌ ತೋರಿಸಲಿ: ಶೋಭಾ ಸವಾಲು

​ಪ್ರಜಾವಾಣಿ ವಾರ್ತೆ
Published 2 ಮೇ 2023, 20:13 IST
Last Updated 2 ಮೇ 2023, 20:13 IST
 ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ    –ಪ್ರಜಾವಾಣಿ ಚಿತ್ರ/

ಬೆಂಗಳೂರು: ಬಜರಂಗದಳವನ್ನು ನಿಷೇಧಿಸುವ ಶಕ್ತಿಯನ್ನು ಕಾಂಗ್ರೆಸ್‌ ತೋರಿಸಲಿ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಈ ಹಿಂದೆ ಆರ್‌ಎಸ್ಎಸ್‌ ಅನ್ನು ನಿಷೇಧಿಸಿತ್ತು. ಸುಪ್ರೀಂಕೋರ್ಟ್‌ ನಿಷೇಧದ ಕ್ರಮವನ್ನು ತಿರಸ್ಕರಿಸಿತ್ತು ಎಂದು ತಿಳಿಸಿದರು.

ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್‌ ಪ್ರಣಾಳಿಕೆ ಸಿದ್ಧಪಡಿಸಿದೆ. ಬಿಜೆಪಿ, ಬಜರಂಗದಳದೊಂದಿಗೆ ಇದೆ. ಕಾಂಗ್ರೆಸ್‌ ದೇಶ ದ್ರೋಹಿಗಳ ಜತೆ ಇದೆ. ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ಜನವಿರೋಧಿಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ADVERTISEMENT

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಪಿಎಫ್‌ಐ ಒತ್ತಡದಿಂದ ಬಜರಂಗದಳ ನಿಷೇಧಿಸುವ ಭರವಸೆ ನೀಡಿದ್ದಾರೆ. ಕೇರಳದ ಮಲಪ್ಪುರಂನಂತೆ ಕರ್ನಾಟಕವನ್ನು ದೇಶ ವಿರೋಧಿ ಚಟುವಟಿಕೆಗಳು ನಡೆಯಲು ಬಿಜೆಪಿ ಬಿಡುವುದಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.