ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಶನಿವಾರ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಈವರೆಗೆ ನಾಲ್ವರು ನಾಮಪತ್ರ ಸಲ್ಲಿಸಿದಂತಾಗಿದೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಶಿರಾ ತಾಲ್ಲೂಕಿನ ಗಂಜಲಗುಂಟೆ ಪ್ರದೀಪ್ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ತಾಲ್ಲೂಕಿನ ತಮ್ಮಡಿಹಳ್ಳಿಯ ಟಿ.ಬಿ.ಸಿದ್ಧರಾಮೇಗೌಡ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಮೊದಲ ದಿನ (ಮಾರ್ಚ್ 28) ಇಬ್ಬರು ನಾಮಪತ್ರ ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.