ADVERTISEMENT

ಚುನಾವಣಾ ಸಭೆ ನಡೆಸಿಲ್ಲ, ಮನವಿ ಸ್ವೀಕರಿಸಿದ್ದೇನೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2024, 12:38 IST
Last Updated 20 ಮಾರ್ಚ್ 2024, 12:38 IST
<div class="paragraphs"><p>ಲಕ್ಷ್ಮಿ ಹೆಬ್ಬಾಳಕರ</p></div>

ಲಕ್ಷ್ಮಿ ಹೆಬ್ಬಾಳಕರ

   

ಬೆಳಗಾವಿ: ‘ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಅದನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಮನೆಗೆ ಬಂದಿದ್ದರು. ನಾನು ಚುನಾವಣೆಯ ಕಾರಣ ಸಭೆ ನಡೆಸಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಚುನಾವಣಾಧಿಕಾರಿಗಳ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, ‘ಈಗ ಗ್ಯಾರಂಟಿ ಯೋಜನೆಗಳು, ಪಲ್ಸ್‌ ಪೋಲಿಯೊ ಕಾರ್ಯಕ್ರಮದ ಒತ್ತಡ ಹೆಚ್ಚಾಗಿದೆ. ಬಿಎಲ್‌ಒ ಆಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಕಾರ್ಯಕರ್ತೆಯರು ಮನವಿ ನೀಡಿದ್ದಾರೆ. ಅವರಿಗೆ ನಾನೇ ತಿಳಿಹೇಳಿ ಕಳಿಸಿದ್ದೇನೆ’ ಎಂದರು.

ADVERTISEMENT

‘ನನ್ನ ಗೃಹಕಚೇರಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ. ಚುನಾವಣೆ ವೇಳೆ ವಿರೋಧಿಗಳು ದೂರು ನೀಡುವುದು ಸಾಮಾನ್ಯ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ನಾನು ನಿಯಮ ಉಲ್ಲಂಘಿಸುವುದಿಲ್ಲ. ನಾನು ದೇಶದ ಕಾನೂನಿಗೆ ಗೌರವ ಕೊಡುತ್ತೇನೆ. ನನಗೆ ಇದು ಐದನೇ ಚುನಾವಣೆ. ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.