ADVERTISEMENT

ಲೋಕಸಭೆ ಚುನಾವಣೆ: ಶಿವಮೊಗ್ಗದಲ್ಲಿ ದಾಖಲೆಗಳಿಲ್ಲದ ₹1.10 ಕೋಟಿ ಮೌಲ್ಯದ ಸೀರೆ ವಶ

-

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 16:13 IST
Last Updated 22 ಮಾರ್ಚ್ 2024, 16:13 IST
ಶಿವಮೊಗ್ಗದ ಕೆ.ಆರ್‌.ಪುರಂನ ಖಾಸಗಿ ಉಗ್ರಾಣದ ಮೇಲೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು ಹಾಗೂ ಪೊಲೀಸರ ತಂಡ ಸೀರೆಗಳನ್ನು ವಶಪಡಿಸಿಕೊಂಡ ನಂತರ ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಪಡೆಯಿತು
ಶಿವಮೊಗ್ಗದ ಕೆ.ಆರ್‌.ಪುರಂನ ಖಾಸಗಿ ಉಗ್ರಾಣದ ಮೇಲೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು ಹಾಗೂ ಪೊಲೀಸರ ತಂಡ ಸೀರೆಗಳನ್ನು ವಶಪಡಿಸಿಕೊಂಡ ನಂತರ ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಪಡೆಯಿತು   

ಶಿವಮೊಗ್ಗ: ಇಲ್ಲಿನ ಕೆ.ಆರ್.ಪುರಂ ಬಡಾವಣೆಯ ಖಾಸಗಿ ಉಗ್ರಾಣದ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು, ಅಲ್ಲಿ ದಾಖಲೆಗಳಿಲ್ಲದೆ ಸಂಗ್ರಹಿಸಿ ಇಟ್ಟಿದ್ದ ₹ 1.10 ಕೋಟಿ ಮೌಲ್ಯದ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಅಧಿಕಾರಿಗಳ ತಂಡ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದೆ. ಉಗ್ರಾಣ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಸೇರಿದೆ ಎಂದು ತಿಳಿದುಬಂದಿದೆ.

‘ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ತಂದಿರಿಸಲಾಗಿತ್ತೇ ಎಂಬುದು ಇನ್ನೂ ಖಚಿತಪಟ್ಟಿಲ್ಲ. ಸೂಕ್ತ ದಾಖಲೆಗಳು ಲಭ್ಯವಾಗದ ಕಾರಣ ಸೀರೆಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಸುಪರ್ದಿಗೆ ವಹಿಸಲಾಗಿದೆ. ಪರಿಶೀಲನೆ ನಡೆದಿದೆ’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.