ಬೆಂಗಳೂರು: ವಿಧಾನಸಭೆ ಚುನಾವಣೆಯ ಮತದಾನವು ಮೇ 10ರಂದು ನಡೆಯಲಿದ್ದು, ಅಂದು ‘ಮೆಟ್ರೊ’ ರೈಲು ಸೇವೆಯನ್ನು ಮಧ್ಯರಾತ್ರಿ ವರೆಗೆ ವಿಸ್ತರಿಸಲಾಗಿದೆ.
ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ, ವೈಟ್ಫೀಲ್ಡ್ (ಕಾಡುಗೋಡಿ)ಗಳಿಂದ ಕೊನೆಯ ನಿಲ್ದಾಣಗಳಿಂದ ಅಂದು ರಾತ್ರಿ 12.05ಕ್ಕೆ ಹೊರಡಲಿವೆ. ಮೆಜೆಸ್ಟಿಕ್ನಿಂದ ಕೊನೆಯ ಮೆಟ್ರೊ ರೈಲುಗಳು ಮಧ್ಯರಾತ್ರಿ 12.35ಕ್ಕೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಹಾಗೂ ರೇಷ್ಮೆಸಂಸ್ಥೆಗೆ ಕಡೆಗೆ ಹೊರಡಲಿವೆ ಎಂದು ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.