ADVERTISEMENT

ಲೋಕಸಭೆ ಚುನಾವಣೆ | ನನ್ನ ಪತ್ನಿ ಗೀತಾಗೆ ಯುವ ಮತದಾರರ ಬೆಂಬಲ: ಶಿವರಾಜ್‌ಕುಮಾರ್

ಪ್ರಜಾವಾಣಿ ವಿಶೇಷ
Published 21 ಮಾರ್ಚ್ 2024, 16:07 IST
Last Updated 21 ಮಾರ್ಚ್ 2024, 16:07 IST

ಕಳೆದ 10 ವರ್ಷಗಳಲ್ಲಿ ಪರಿಹಾರವಾಗದಿರುವ ಸಮಸ್ಯೆಗಳಿಂದ ಬೇಸತ್ತಿರುವ ಮತದಾರರು ಪರ್ಯಾಯ ಪಕ್ಷದತ್ತ ಆಕರ್ಷಿತರಾಗುತ್ತಿದ್ದಾರೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಕುಂದಾಪುರ ತಾಲ್ಲೂಕಿನ ವಂಡ್ಸೆ ನೆಂಪುವಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಅವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜಕಾರಣದಲ್ಲಿ ಭರವಸೆ ನೀಡುವುದು ಮುಖ್ಯವಲ್ಲ. ಈಡೇರಿಸುವುದು ಮುಖ್ಯ. ಎಲ್ಲವನ್ನೂ ಪ್ರಾಯೋಗಿಕವಾಗಿ ನೋಡುವ ಅಳೆಯುವ ಮನೋಭಾವ ರೂಢಿಸಿಕೊಂಡಿರುವ ಯುವ ಮತದಾರರು ಈ ಬಾರಿ ಪತ್ನಿ ಗೀತಾ ಅವರನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.