ADVERTISEMENT

ಬಳ್ಳಾರಿ ನಗರ ಕ್ಷೇತ್ರದಿಂದ ಸೋಮಶೇಖರರೆಡ್ಡಿ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2023, 11:09 IST
Last Updated 15 ಏಪ್ರಿಲ್ 2023, 11:09 IST
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆ‍‍ಪಿ ಅಭ್ಯರ್ಥಿ ಸೋಮಶೇಖರ ರೆಡ್ಡಿ ಶನಿವಾರ ಚುನಾವಣಾ ಅಧಿಕಾರಿ ಎಸ್.ಎನ್‌. ರುದ್ರೇಶ್‌ ಅವರಿಗೆ ನಾಮಪತ್ರ ಸಲ್ಲಿಸಿದರು
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆ‍‍ಪಿ ಅಭ್ಯರ್ಥಿ ಸೋಮಶೇಖರ ರೆಡ್ಡಿ ಶನಿವಾರ ಚುನಾವಣಾ ಅಧಿಕಾರಿ ಎಸ್.ಎನ್‌. ರುದ್ರೇಶ್‌ ಅವರಿಗೆ ನಾಮಪತ್ರ ಸಲ್ಲಿಸಿದರು   

ಬಳ್ಳಾರಿ: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆ‍ಪಿ ಅಭ್ಯರ್ಥಿ ಜಿ. ಸೋಮಶೇಖರ್ ರೆಡ್ಡಿ ಶನಿವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮುನ್ನ ಸೋಮಶೇಖರ್ ರೆಡ್ಡಿ ಆಂಧ್ರದ ಅನಂತಪುರ ಜಿಲ್ಲೆಯ ಕಸಾಪುರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬಿ ಫಾರಂ ಇಟ್ಟು ಪೂಜೆ ಸಲ್ಲಿಸಿದರು. ಆನಂತರ ಬಳ್ಳಾರಿ ನಗರದ ಕನಕದರ್ಗಮ್ಮ ದೇವಿಯ ದೇವಸ್ಥಾನದಲ್ಲೂ ಪೂಜೆ ಸಲ್ಲಿಸಿದರು.

ಬಳಿಕ ಸಾವಿರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆಯಲ್ಲಿ ತೆರಳಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಚುನಾವಣಾಧಿಕಾರಿಯಾಗಿರುವ ಪಾಲಿಕೆ ಆಯುಕ್ತ .ಎಸ್‌.ಎನ್‌. ರುದ್ರೇಶ್‌ ಅವರಿಗೆ ನಾಮಪತ್ರ ಸಲ್ಲಿಸಿದರು.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್ ರೆಡ್ಡಿ, ಮೂರನೇ ಬಾರಿಗೆ ವಿಧಾನಸೌಧ ಪ್ರವೇಶಿಸಲು ನಾಮಪತ್ರ ಸಲ್ಲಿಸುತ್ತಿದ್ದು, ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡಿರುವ ಕಾರಣ ಮತ್ತೊಮ್ಮೆ ಅತ್ಯಧಿಕ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದರು.

ಈ ವೇಳೆ ಸೋಮಶೇಖರ್ ರೆಡ್ಡಿ ಅವರೊಂದಿಗೆ ಸಚಿವ ಬಿ ಶ್ರೀರಾಮುಲು, ಎಂಎಲ್‌ಸಿ ವೈ. ಸತೀಶ್ ಸೇರಿ ಹಲವು ಬಿಜೆಪಿ ಮುಖಂಡರು ಇದ್ದರು. ಬಳ್ಳಾರಿ ನಗರ ಕ್ಷೇತ್ರದಿಂದ ಸೋಮಶೇಖರರೆಡ್ಡಿ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.