ಬಸವಕಲ್ಯಾಣ (ಬೀದರ್ ಜಿಲ್ಲೆ): ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಮಹಾರಾಷ್ಟ್ರ ಗಡಿಯಲ್ಲಿರುವ ಚೆಕ್ ಪೋಸ್ಟ್ನಲ್ಲಿ ಸೋಮವಾರ ವಾಹನದಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹3 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
ಬಿ. ಶ್ರೀಧರ ಎನ್ನುವವರು ಗೋವಾದಿಂದ ತೆಲಂಗಾಣದ ಸಿಕಂದರಾಬಾದ್ಗೆ ಹಣ ತೆಗೆದುಕೊಂಡು ಹೋಗುತ್ತಿದ್ದರು.
ಕಣ್ಗಾವಲು ಸಮಿತಿಯ ಸಂತೋಷಕುಮಾರ ಚವಾಣ್ ನೇತೃತ್ವದಲ್ಲಿ ಹಣ ಜಪ್ತಿ ಕಾರ್ಯ ನಡೆದಿದೆ. ತಹಶೀಲ್ದಾರ್ ಶಾಂತಗೌಡ ಬಿರಾದಾರ, ಮಂಠಾಳ ಸಿಪಿಐ ಕೃಷ್ಣಕುಮಾರ, ಎಸೈ ರಮೇಶ, ಪಿಡಿಒ ಭೀಮಶಾ ದಂಡಿನ್ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.