ADVERTISEMENT

ಮೋದಿ ಚಿತ್ರ ಬಳಕೆ: ಈಶ್ವರಪ್ಪ ವಿರುದ್ಧ ಬಿಜೆಪಿಯಿಂದ ದಾವೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2024, 3:10 IST
Last Updated 16 ಏಪ್ರಿಲ್ 2024, 3:10 IST
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ   

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿರುವ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ಪ್ರಚಾರದ ವೇಳೆ ಹಾಗೂ ಸಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಕೆ ಮಾಡುವುದನ್ನು ನಿರ್ಬಂಧಿಸುವಂತೆ ಕೋರಿ ಬಿಜೆಪಿ ಜಿಲ್ಲಾ ಘಟಕವು ಇಲ್ಲಿನ ಸಿವಿಲ್ ನ್ಯಾಯಾಲಯದಲ್ಲಿ ಸೋಮವಾರ ದಾವೆ ಹೂಡಿದೆ.

ಬಿಜೆಪಿಯ ಅಧಿಕೃತ ಅಭ್ಯರ್ಥಿಗೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸಲು ಅವಕಾಶವಿದೆ. ಬೇರೆಯವರು ಬಳಕೆ ಮಾಡಿದರೆ ಅದು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್– 29ರ ಉಲ್ಲಂಘನೆಯಾಗುತ್ತದೆ. ಹೀಗಾಗಿ ಕೆ.ಎಸ್. ಈಶ್ವರಪ್ಪ ಚುನಾವಣೆ ಪ್ರಚಾರ ಸಭೆಯ ವೇದಿಕೆಗಳಲ್ಲಿ ನರೇಂದ್ರ ಮೋದಿ ಭಾವಚಿತ್ರ ಮಾತ್ರವಲ್ಲ ಹೆಸರು ಬಳಕೆ ಮಾಡಿ ಮತ ಕೇಳುವುದಕ್ಕೂ ತಡೆಯಾಜ್ಞೆ ನೀಡುವಂತೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ದಾವೆಯಲ್ಲಿ ಕೋರಿದ್ದಾರೆ.

ಬಿಜೆಪಿ ಪರವಾಗಿ ವಕೀಲ ಕೆ. ಬಸಪ್ಪಗೌಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮೋದಿ ಭಾವಚಿತ್ರ ಬಳಕೆ ಸಂಬಂಧ ಈಶ್ವರಪ್ಪ ಈ ಮೋದಲೇ ಕೇವಿಯಟ್‌ ಸಲ್ಲಿಸಿದ್ದು, ನ್ಯಾಯಾಲಯ ಮಂಗಳವಾರ ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎಂದು ತಿಳಿದುಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.