ಬೆಂಗಳೂರು: ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಲೋಕಸಭೆಯ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ಲಭ್ಯ ಮಾಹಿತಿ ಪ್ರಕಾರ 296 ನಾಮಪತ್ರಗಳು ಸಲ್ಲಿಕೆಯಾಗಿವೆ.
ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚು 33 ನಾಮಪತ್ರ ಸಲ್ಲಿಕೆಯಾಗಿದ್ದರೆ, ರಾಯಚೂರಿನಲ್ಲಿ ಅತೀ ಕಡಿಮೆ 4 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಸಂಪೂರ್ಣ ಮಾಹಿತಿ ಸಿಗಬೇಕಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ನಾಮಪತ್ರಗಳ ಪರಿಶೀಲನೆ ಶುಕ್ರವಾರ ನಡೆಯಲಿದ್ದು, ವಾಪಸು ಪಡೆಯಲು ಸೋಮವಾರ (ಏ. 8) ಕೊನೆ ದಿನ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.