ಹೊಸಪೇಟೆ: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿದಿರುವ ಸುಮಲತಾ ಅವರ ಗೆಲುವಿಗೆ ಪ್ರಾರ್ಥಿಸಿ ಅಂಬರೀಶ್ ಅವರ ಅಭಿಮಾನಿಗಳು ಗುರುವಾರ ಇಲ್ಲಿನ ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ವಿರೂಪಾಕ್ಷೇಶ್ವರನಿಗೆ ರುದ್ರಾಭಿಷೇಕ ಮಾಡಿಸಿ, ನಂತರ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ‘ಸುಮಲತಾ ಅಕ್ಕನವರಿಗೆ ಜಯವಾಗಲಿ’ ಎಂದು ಹರಸಿದರು.
‘ಅಂಬರೀಶ್ ಅವರು ಒಬ್ಬ ನಟರಾಗಿ, ರಾಜಕಾರಣಿಯಾಗಿ ಈ ನಾಡಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಪತ್ನಿ ಚುನಾವಣಾ ಕಣದಲ್ಲಿ ಏಕಾಂಗಿಯಾಗಿ ಹೋರಾಡುತ್ತಿರುವುದು ಹೆಮ್ಮೆಯ ಸಂಗತಿ. ರಾಜಕೀಯ ಎಂದರೆ ಮಹಿಳೆಯರು ಸಾಮಾನ್ಯವಾಗಿ ದೂರ ಉಳಿಯುತ್ತಾರೆ. ಆದರೆ, ಸುಮಲತಾ ಅವರು ಧೈರ್ಯದಿಂದ ರಾಜಕೀಯ ಪ್ರವೇಶಿಸಿ, ಚುನಾವಣೆಗೆ ನಿಂತಿದ್ದಾರೆ. ಅವರು ಭಾರಿ ಬಹುಮತದೊಂದಿಗೆ ಗೆಲ್ಲಬೇಕೆಂದು ಹಾರೈಸಿ ವಿಶೇಷ ಪೂಜೆ ಮಾಡಿಸಿದ್ದೇವೆ’ ಎಂದು ಅಂಬರೀಶ್ ಅಭಿಮಾನಿ ಮಾದಿಗರ ವೀರೇಶ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
ಅಭಿಮಾನಿಗಳಾದನಂಜುಂಡಿ, ಹುಲುಗಪ್ಪ, ಚಂದ್ರು, ಲಕ್ಷ್ಮಣ, ಗುರುನಾಥ, ಕಿಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.