ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಇದೇ 31ರಂದು ನಡೆಯಲಿದೆ.
ಮೈಸೂರು ರಸ್ತೆಯ ಹಲಗೆ ವಡೇರಹಳ್ಳಿಯ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಬೆಳಿಗ್ಗೆ 8 ಗಂಟೆಗೆ ಎಣಿಕೆ ಆರಂಭವಾಗಲಿದೆ. ಬೆಳಿಗ್ಗೆ 11ಗಂಟೆಗೆ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ.
ಚುನಾವಣಾ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ಮೇ 15ರಂದು ನಡೆಯಬೇಕಿದ್ದ ಮತದಾನವನ್ನು ಮುಂದೂಡಲಾಗಿತ್ತು. ಇದೇ 28ರಂದು ಮತದಾನ ನಡೆದಿದ್ದು, ಶೇ 54.20 ರಷ್ಟು ಮತದಾನ ನಡೆದಿತ್ತು.
ಮಾಜಿ ಶಾಸಕರಾದ ಕಾಂಗ್ರೆಸ್ನ ಮುನಿರತ್ನ, ಬಿಜೆಪಿಯ ತುಳಸಿ ಮುನಿರಾಜುಗೌಡ ಹಾಗೂ ಜೆಡಿಎಸ್ನ ಜಿ.ಎಚ್. ರಾಮಚಂದ್ರ ಕಣದಲ್ಲಿದ್ದಾರೆ. ನಟ ಹುಚ್ಚ ವೆಂಕಟ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಚುನಾವಣೆಗಳಲ್ಲಿ ಎದುರಾಳಿಗಳಾಗಿ ಸ್ಪರ್ಧಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.