ಬೀದರ್: ತಮಗೆ ಹಾಗೂ ಅಲ್ಪಸಂಖ್ಯಾತರ ಕೋಟಾದಲ್ಲಿ ಬೀದರ್ ಶಾಸಕ ರಹೀಂ ಖಾನ್ ಅವರಿಗೆ ಸಚಿವ ಸ್ಥಾನ ಕೊಡಬೇಕು’ ಎಂದು ಕಾಂಗ್ರೆಸ್ನ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಆಗ್ರಹಿಸಿದರು.
‘ಶಾಸಕರಿಗೆ ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ಕೊಡಬೇಕು. ವಿಜಯಪುರ ಶಾಸಕ ಎಂ.ಬಿ.ಪಾಟೀಲ ಗುಂಪಿನಲ್ಲಿ ನಾನು ಇಲ್ಲ. ನನಗೆ ಸಚಿವ ಸ್ಥಾನ ಕೊಡುವಂತೆ ನಾಲ್ವರು ಶಾಸಕರು ಕಾಂಗ್ರೆಸ್ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ’ ಎಂದು ತಿಳಿಸಿದರು.
‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿದರೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಎರಡು ನಿಮಿಷವೂ ಉಳಿಯುವುದಿಲ್ಲ’ ಎಂದು ಶಾಸಕ ಬಿ.ನಾರಾಯಣರಾವ್ ಗುಡುಗಿದರು. ಈಶ್ವರ ಖಂಡ್ರೆ ಬೇಡಿಕೆಗೆ ಶಾಸಕ ರಹೀಂ ಖಾನ್ ಸಹಮತ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.