ADVERTISEMENT

‘ಎಲ್ಲರೂ ಸಮಾಧಾನಗೊಂಡಿದ್ದಾರೆ’

​ಪ್ರಜಾವಾಣಿ ವಾರ್ತೆ
Published 10 ಜೂನ್ 2018, 19:30 IST
Last Updated 10 ಜೂನ್ 2018, 19:30 IST

ಬಾಗಲಕೋಟೆ: ‘ಸಚಿವ ಸ್ಥಾನ ಸಿಗದ ಕಾರಣ ಈಗ ಯಾವುದೇ ಶಾಸಕರೂ ಅತೃಪ್ತಿ ಹೊಂದಿಲ್ಲ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಬಾದಾಮಿ ಶಾಸಕ ಸಿದ್ದರಾಮಯ್ಯ ಹೇಳಿದರು.

ಬಾದಾಮಿ ತಾಲ್ಲೂಕು ನೀಲಗುಂದದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಿನ್ನಮತದ ಬಗ್ಗೆ ಹೈಕಮಾಂಡ್ ಜೊತೆಯೂ ಮಾತನಾಡಿದ್ದೇನೆ. ಈ ವಿಚಾರದಲ್ಲಿ ದೆಹಲಿಯಿಂದ ನನಗೆ ಯಾವುದೇ ಕರೆ ಬಂದಿಲ್ಲ. ಹಾಗಾಗಿ ಅಲ್ಲಿಗೆ ಹೋಗಿಲ್ಲ. ಫೋನ್ ಮೂಲಕವೇ ಚರ್ಚಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಆ ಬಗ್ಗೆ ಕರೆದು ಕೇಳಿದರೆ ನನ್ನ ಅಭಿಪ್ರಾಯ ತಿಳಿಸುವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT