ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಕೇಂದ್ರ ಮಾಜಿ ಸಚಿವ ಎಸ್.ಎಂ. ಕೃಷ್ಣ ಅವರು ಮರಳಿ ಕಾಂಗ್ರೆಸ್ಗೆ ಬಂದರೆ ಸ್ವಾಗತ ಎಂದು ಕೇಂದ್ರ ಮಾಜಿ ಸಚಿವ ಕೆ. ರಹಮಾನ್ ಖಾನ್ ಮಂಗಳವಾರ ಹೇಳಿದ್ದಾರೆ.
ಎಸ್.ಎಂ. ಕೃಷ್ಣ ಅವರು ಕಾಂಗ್ರೆಸ್ಗೆ ಮರು ಸೇರ್ಪಡೆಯಾಗುತ್ತಾರೆ ಎಂಬ ಬಗ್ಗೆ ವರದಿಯಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ರಹಮಾನ್ ಖಾನ್ ಅವರು, ‘ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಮರಳಿ ಬಂದರೆ ಸ್ವಾಗತ’ ಎಂದು ತಿಳಿಸಿದ್ದಾರೆ.
ಎಸ್.ಎಂ. ಕೃಷ್ಣ ಅವರು ಬಿಜೆಪಿಯಿಂದ ಮರಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ? ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.