ADVERTISEMENT

ಕರ್ನಾಟಕ ವಿಧಾನಸಭಾ ಚುನಾವಣೆ: ಮತದಾನ ಆರಂಭ

​ಪ್ರಜಾವಾಣಿ ವಾರ್ತೆ
Published 12 ಮೇ 2018, 3:56 IST
Last Updated 12 ಮೇ 2018, 3:56 IST
ಶಿರಸಿಯ ಎರಡನೇ ನಂಬರ್ ಶಾಲೆಯ ಮತಗಟ್ಟೆಯಲ್ಲಿ ಮತದಾನ ಆರಂಭವಾಗುವ ಹೊತ್ತಿಗೆ ಮತದಾರರು ಸರದಿಯಲ್ಲಿ ನಿಂತಿದ್ದರು.
ಶಿರಸಿಯ ಎರಡನೇ ನಂಬರ್ ಶಾಲೆಯ ಮತಗಟ್ಟೆಯಲ್ಲಿ ಮತದಾನ ಆರಂಭವಾಗುವ ಹೊತ್ತಿಗೆ ಮತದಾರರು ಸರದಿಯಲ್ಲಿ ನಿಂತಿದ್ದರು.   

ಬೆಂಗಳೂರು: ಇಡೀ ದೇಶದ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ 222 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ.ಈ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯವನ್ನು 5.02 ಕೋಟಿ ಮತದಾರರು ಬರೆಯಲಿದ್ದಾರೆ.

ಬೆಂಗಳೂರಿನ ಜಯನಗರದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರ ಮತ್ತು ನಕಲಿ ಗುರುತಿನ ಚೀಟಿ  ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣೆ ಮುಂದೂಡಲ್ಪಟ್ಟಿರುವುದರಿಂದ  ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇ 28ಕ್ಕೆ ಮುಂದೂಡಲಾಗಿದ್ದು, 31ಕ್ಕೆ ಮತ ಎಣಿಕೆ ನಡೆಯಲಿದೆ.

ಮತಗಟ್ಟೆಯತ್ತ ಮತದಾರರು: ಕ್ಷಣ ಕ್ಷಣದ ಸುದ್ದಿ

ADVERTISEMENT

*ಮಾಜಿ ಸಚಿವ ಬಿಜೆಪಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಸ್.ಎ.ರವೀಂದ್ರನಾಥ್ ಶಿರಮಗೊಂಡನಹಳ್ಳಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ರತ್ನಮ್ಮ ಅವರೂ ಮತ ಹಾಕಿದರು.


*ಈ ಬಾರಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗುವ ಸಾಧ್ಯತೆ ಇದೆ. ಕರ್ನಾಟಕದಿಂದ ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೆಸೆಯುವುದಕ್ಕಾಗಿ ಇಲ್ಲಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲಿದ್ದಾರೆ: ಸದಾನಂದ ಗೌಡ

* ಕೊಳ್ಳೇಗಾಲದಲ್ಲಿ 11 ಲಕ್ಷ ನಗದು‌ ವಶ


ಚಾಮರಾಜನಗರ : ಜಿಲ್ಲೆಯ ಕೊಳ್ಳೇಗಾಲದ ಲಿಂಗನಪುರದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 11 ಲಕ್ಷ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.  ನಸುಕಿನ 4 ಗಂಟೆ ಸುಮಾರಿನಲ್ಲಿ ಗ್ರಾಮದಲ್ಲಿ ನಿಂತಿದ್ದ ಕಾರನ್ನು ವಶಕ್ಕೆ ತೆಗೆದುಕೊಂಡು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ.

'ಮೋದಿ ಅಲೆ, ಯಡಿಯೂರಪ್ಪ ಮಾಡಿದ ಕೆಲಸದಿಂದ ಗೆಲುವು'


ದಾವಣಗೆರೆ: ಪ್ರಧಾನಿ ಮೋದಿ ಅಲೆ, ಅಮಿತ್ ಶಾ ಅವರ ಕಾರ್ಯ ತಂತ್ರ ಹಾಗೂ ಉಡಿಯೂರಪ್ಪ ಅರ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಗೆಲುವಿಗೆ ಕಾರಣವಾಗಲಿವೆ ಎಂದು ಬಿಜೆಪಿ ಅಭ್ಯರ್ಥಿ ಎಸ್.ಎ.ರವೀಂದ್ರನಾಥ್ ಹೇಳಿದರು.
ಕ್ಷೇತ್ರದಲ್ಲಿ ನೀರಾವರಿ ಸಮಸ್ಯೆ ಹೆಚ್ಚಿದ್ದು ಜನ ಬೇಸತ್ತಿದ್ದಾರೆ. ಹೀಗಾಗಿ ಬಿಜೆಪಿಗೆ ಮತ ನೀಡಲಿದ್ದಾರೆ. ಬಿಜೆಪಿ ನೀರಾವರಿಯಲ್ಲಿ ಅಭಿವೃದ್ಧಿ ಸಾಧಿಸಿ ತೋರಿಸಲಿದೆ ಎಂದು ತಿಳಿಸಿದರು.

*ಸ್ವಾಮಿ ವಿವೇಕಾನಂದ ಬಡಾವಣೆಯ ಮತಗಟ್ಟೆಯಲ್ಲಿ ವಾಗ್ವಾದ

ದಾವಣಗೆರೆ: ಸ್ವಾಮಿ ವಿವೇಕಾನಂದ ಬಡಾವಣೆಯ ಮತಗಟ್ಟೆ 198ರಲ್ಲಿ ಮತದಾರರು ತಂದ ವೋಟರ್ ಸ್ಲಿಪ್ ನಿರಾಕರಿಸುತ್ತಿರುವ ಮತಗಟ್ಟೆ ಸಿಬ್ಬಂದಿ, ವಾಗ್ವಾದ. ಗೊಂದಲ.

*ಯತ್ನಾಳ ವಿಶೇಷ ಪೂಜೆ

ವಿಜಯಪುರ:ಮುಂಜಾನೆಯೇ ಸಿದ್ದೇಶ್ವರ ಗುಡಿಗೆ ಆಗಮಿಸಿದ್ದ ಯತ್ನಾಳ ವಿಶೇಷ ಪೂಜೆ ಸಲ್ಲಿಸಿ, ಗೋ ಮಾತೆಗೆ ಪೂಜೆ ಸಲ್ಲಿಸಿದ ಬಳಿಕ ಮತ ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.