ADVERTISEMENT

ಕಾಂಗ್ರೆಸ್‌ ಮುಖಂಡರ ಗೋಪ್ಯ ಚರ್ಚೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2018, 19:30 IST
Last Updated 18 ಏಪ್ರಿಲ್ 2018, 19:30 IST
ಸಾಂದರ್ಭಿಕ ಚಿತ್ರ.
ಸಾಂದರ್ಭಿಕ ಚಿತ್ರ.   

ಮೈಸೂರು: ಬಂಡಾಯ ಶಮನ ಹಾಗೂ ಬಾದಾಮಿ ಕ್ಷೇತ್ರದ ಟಿಕೆಟ್‌ ಗೊಂದಲ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾರಥ್ಯದಲ್ಲಿ ಕಾಂಗ್ರೆಸ್‌ ಮುಖಂಡರು ಬುಧವಾರ ರಾತ್ರಿ ಗೋಪ್ಯ ಸಭೆ ನಡೆಸಿದರು.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ವಿಶೇಷ ವಿಮಾನದಲ್ಲಿ ದಿಢೀರ್ ಆಗಿ ಮೈಸೂರಿಗೆ ಬಂದು ಹೋಟೆಲ್‌ವೊಂದರಲ್ಲಿ ಚರ್ಚಿಸಿದರು.

ಕಾಂಗ್ರೆಸ್‌ನ 218 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಇದೇ ಮೊದಲ ಬಾರಿಗೆ ಈ ನಾಲ್ವರು ಜೊತೆಗೂಡಿ ಸಭೆ ನಡೆಸಿದ್ದಾರೆ.

ADVERTISEMENT

ಬದಾಮಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಬಿ.ಬಿ.ಚಿಮ್ಮನಕಟ್ಟಿ ಕೂಡ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಈ ಸಂದರ್ಭದಲ್ಲಿ ಪ್ರಯತ್ನಿಸಿದ್ದಾರೆ. ಆದರೆ, ಸಿದ್ದರಾಮಯ್ಯ ಗರಂ ಆದರು ಎನ್ನಲಾಗಿದೆ.

ಚಿಮ್ಮನಕಟ್ಟಿ ಬದಲಿಗೆ ಡಾ.ದೇವರಾಜ್ ಪಾಟೀಲ ಅವರಿಗೆ ಈಗಾಗಲೇ ಈ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಆದರೆ, ಡಾ.ಪರಮೇಶ್ವರ್‌ ಅವರು ‘ಬಿ’ ಫಾರಂ ತಡೆ ಹಿಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.