ADVERTISEMENT

ಕುದುರೆ ವ್ಯಾಪಾರದಲ್ಲಿ ತೊಡಗಿಲ್ಲ: ಜಾವಡೇಕರ್

​ಪ್ರಜಾವಾಣಿ ವಾರ್ತೆ
Published 16 ಮೇ 2018, 8:37 IST
Last Updated 16 ಮೇ 2018, 8:37 IST
ಪ್ರಕಾಶ್ ಜಾವಡೇಕರ್  –ಎಎನ್‌ಐ ಚಿತ್ರ
ಪ್ರಕಾಶ್ ಜಾವಡೇಕರ್ –ಎಎನ್‌ಐ ಚಿತ್ರ   

ಬೆಂಗಳೂರು: ಕುದುರೆ ವ್ಯಾಪಾರದ ಬಗ್ಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಾಡಿರುವ ಆರೋಪ ಆಧಾರರಹಿತವಾದದ್ದು ಎಂದು ಬಿಜೆಪಿಯ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಹೇಳಿದರು.

ನಾವು ಕುದುರೆ ವ್ಯಾಪಾರದಲ್ಲಿ ತೊಡಗಿಲ್ಲ. ಅವರದ್ದೇ (ಜೆಡಿಎಸ್‌ ಮತ್ತು ಕಾಂಗ್ರೆಸ್) ಪಕ್ಷದ ಶಾಸಕರು ಮೈತ್ರಿ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ಅವರು ಹೇಳಿದರು.

₹100 ಕೋಟಿ ಆಮಿಷವೊಡ್ಡಿದ ಆರೋಪ ಮಾಡಲಾಗಿದೆ. ಆಧಾರರಹಿತ ಆರೋಪ ಮಾಡುವ ಮೂಲಕ ಕಾಂಗ್ರೆಸ್‌ ಮತ್ತು ಜೆಡಿಎಸ್‌ ರಾಜಕೀಯ ಮಾಡುತ್ತಿವೆ ಎಂದು ಜಾವಡೇಕರ್ ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.