ಬಾಗಲಕೋಟೆ: ಬಸವ ಜಯಂತಿ ಅಂಗವಾಗಿ ಬುಧವಾರ ಕೂಡಲಸಂಗಮ ಕ್ಷೇತ್ರದ ಬಸವಣ್ಣನ ಐಕ್ಯ ಸ್ಥಳಕ್ಕೆ ಸಚಿವ ಎಂ.ಬಿ. ಪಾಟೀಲ ಅವರು ಭೇಟಿ ನೀಡಿದರು.
ಕುಟುಂಬ ಸಮೇತರಾಗಿ ಬಂದಿದ್ದ ಎಂ.ಬಿ. ಪಾಟೀಲ, ಬಸವಣ್ಣನ ಐಕ್ಯ ಸ್ಥಳದಲ್ಲಿ 20 ನಿಮಿಷ ಧ್ಯಾನಕ್ಕೆ ಮೊರೆ ಹೋದರು.
ಬಳಿಕ ಕ್ಷೇತ್ರಾಧಿಪತಿ ಸಂಗಮನಾಥ, ಗಣೇಶ ದೇವಸ್ಥಾನ, ಜಾತವೇದ ಮುನಿಗಳ ಗದ್ದುಗೆಗೆ ಭೇಟಿ ನೀಡಿದರು.
ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.