ADVERTISEMENT

‘ಕೈ’-‘ದಳ’ ದೋಸ್ತಿ ಆದ್ರೆ ಹಾಸನ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆಯಾಗಲಿದೆ: ಮಂಜೇಗೌಡ

​ಪ್ರಜಾವಾಣಿ ವಾರ್ತೆ
Published 16 ಮೇ 2018, 8:50 IST
Last Updated 16 ಮೇ 2018, 8:50 IST
‘ಕೈ’-‘ದಳ’ ದೋಸ್ತಿ ಆದ್ರೆ ಹಾಸನ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆಯಾಗಲಿದೆ: ಮಂಜೇಗೌಡ
‘ಕೈ’-‘ದಳ’ ದೋಸ್ತಿ ಆದ್ರೆ ಹಾಸನ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆಯಾಗಲಿದೆ: ಮಂಜೇಗೌಡ   

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರದ ರಚನೆ‌ಯಾದರೆ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಸಮಾಧಿಯಾಗಲಿದೆ. ‘ಕೈ’-‘ದಳ’ ದೋಸ್ತಿ ಆದ್ರೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆಯಾಗಲಿದೆ ಎಂದು ಹೊಳೆನರಸೀಪುರ ಕ್ಷೇತ್ರದ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿ ಬಾಗೂರು ಮಂಜೇಗೌಡ ಅವರು ಸಮ್ಮಿಶ್ರ ಸರ್ಕಾರ ರಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ತಮ್ಮ ಪರ ಪ್ರಚಾರಕ್ಕೆ ಬಾರದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದರು.

ಅವರ ಮೇಲೆ ಯಾವ ಒತ್ತಡ ಇತ್ತೋ ನನಗೆ ಗೊತ್ತಿಲ್ಲ. ನಾನು ಹರಕೆಯೆ ಕುರಿ ಆಗಿಲ್ಲ, ಬಲಿಪಶು ಆಗಿಲ್ಲ. ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು. ಕುಮಾರಸ್ವಾಮಿ ಸಿಎಂ ಆಗಲ್ಲ ಅಂತ ಸಿದ್ದರಾಮಯ್ಯ ಹೇಳುತ್ತಿದ್ದರು. ಆದರೆ, ಅವರೇ ಎಚ್‌ಡಿಕೆಯನ್ನು ಸಿಎಂ ಮಾಡಲು ಹೊರಟಿಲ್ಲವೇ ಎಂದರು.

ADVERTISEMENT

ಭಾವನಾತ್ಮಕ ವಿಷಯದಲ್ಲಿ ರೇವಣ್ಣ ಅವರಿಗೆ ಗೆಲುವಾಗಿದೆ. 270 ಗ್ರಾಮಗಳಲ್ಲಿ ದೇವಾಲಯ ಅಪೂರ್ಣ ವಾಗಿರುವುದರಿಂದ ಜನ ಅವರಿಗೆ ಓಟ್ ಹಾಕಿದ್ದಾರೆ ಎಂದರು.

ಹಣದ ಬಲದಿಂದ ನನಗೆ ಸೋಲು: ಎಚ್.ಕೆ.ಮಹೇಶ್
ಹಣದ ಬಲದಿಂದ ನನಗೆ ಸೋಲಾಗಿದೆ. ನಾನು ಯಾರ ಬಳಿ ಹೋದ್ರೂ ನೇರವಾಗಿ ಹಣ ಕೇಳುತ್ತಿದ್ದರು ಎಂದು ಹಾಸನ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಚ್.ಕೆ.ಮಹೇಶ್ ಹೇಳಿದರು.

ನಾನು ಯಾರೊಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದು ಅಲ್ಲಾ, ಮಂಜುನಾಥ, ನನ್ನ ಹೆತ್ತವರ ಮೇಲೆ ಆಣೆ ಪ್ರಮಾಣ ಮಾಡಿದ ಮಹೇಶ್, ಒಳ ವ್ಯವಹಾರಕ್ಕೆ ನಾನು ಕೈ ಹಾಕಿಲ್ಲ, ಅಪ ಪ್ರಚಾರ ಮಾಡಬೇಡಿ ಎಂದು ಕೈ ಮುಗಿದರು.

ನಾನೂ ನನ್ನ ಕೈಲಾದ ಹಣ ಹಂಚಿದ್ದೇನೆ ಎಂದು ಮಹೇಶ್‌ ಈ ವೇಳೆ ಒಪ್ಪಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.