ADVERTISEMENT

ಚನ್ನಪಟ್ಟಣ, ರಾಮನಗರ ಕ್ಷೇತ್ರಗಳ ಅಭ್ಯರ್ಥಿಯಾಗಿ ಎಚ್‌ಡಿಕೆ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 12:21 IST
Last Updated 20 ಏಪ್ರಿಲ್ 2018, 12:21 IST
ಚನ್ನಪಟ್ಟಣ, ರಾಮನಗರ ಕ್ಷೇತ್ರಗಳ ಅಭ್ಯರ್ಥಿಯಾಗಿ ಎಚ್‌ಡಿಕೆ ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ, ರಾಮನಗರ ಕ್ಷೇತ್ರಗಳ ಅಭ್ಯರ್ಥಿಯಾಗಿ ಎಚ್‌ಡಿಕೆ ನಾಮಪತ್ರ ಸಲ್ಲಿಕೆ   

ರಾಮನಗರ: ಚನ್ನಪಟ್ಟಣ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಈ ಅಂಗವಾಗಿ ಎರಡೂ ನಗರಗಳಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು.

ರಾಮನಗರ ತಹಶೀಲ್ದಾರ್‌ ಕಚೇರಿಗೆ ಮಧ್ಯಾಹ್ನ 2.45ಕ್ಕೆ ಧಾವಿಸಿದ ಎಚ್‌ಡಿಕೆ ತರಾತುರಿಯಲ್ಲಿಯೇ ಚುನಾವಣಾ ಅಧಿಕಾರಿಗಳ ಕಚೇರಿಯತ್ತ ಹೆಜ್ಜೆ ಹಾಕಿದರು. ಪತ್ನಿ ಅನಿತಾ ಹಾಗೂ ಪಕ್ಷದ ಮುಖಂಡ ಫಾರೂಕ್ ಜೊತೆಗೂಡಿ ಕ್ಷೇತ್ರದ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

ಮಿನಿ ವಿಧಾನಸೌಧದ ಸುತ್ತಮುತ್ತ ಸಾವಿರಾರು ಕಾರ್ಯಕರ್ತರು ಕುಮಾರಸ್ವಾಮಿ ಬರುವಿಕೆಗಾಗಿ ಕಾದು ಕುಳಿತಿದ್ದರು. ನಾಮಪತ್ರ ಸಲ್ಲಿಸಿ ಹೊರಕ್ಕೆ ಬರುತ್ತಲೇ ಮೆರವಣಿಗೆಗೆ ಚಾಲನೆ ದೊರೆಯಿತು. ಎಲ್ಲೆಡೆ ಜೆಡಿಎಸ್ ಬಾವುಟಗಳು ರಾರಾಜಿಸಿದವು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.