ಹುಬ್ಬಳ್ಳಿ: ‘ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ ಈ ಮೂವರಲ್ಲಿ ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದನ್ನು ಈಗಲೇ ಹೇಳಲಾಗದು. ಚುನಾವಣೆಯ ಫಲಿತಾಂಶ ಬಂದ ಬಳಿಕವಷ್ಟೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯು ಆ ಬಗ್ಗೆ ನಿರ್ಧರಿಸಲಿದೆ’ ಎಂದು ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಸುಶೀಲ್ಕುಮಾರ್ ಶಿಂಧೆ ಶುಕ್ರವಾರ ಇಲ್ಲಿ ಹೇಳಿದರು.
‘ಕಾಂಗ್ರೆಸ್, ದಲಿತ ಸಮುದಾಯದ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂಬ ಮೋದಿ ಹೇಳಿಕೆಯನ್ನು ಒಪ್ಪಲಾಗದು. ಇನ್ನೂ ಚುನಾವಣೆ ಮುಗಿದಿಲ್ಲ; ಫಲಿತಾಂಶ ಬಂದಿಲ್ಲ. ಹಾಗಾಗಿ, ರಾಜ್ಯದ ಚುಕ್ಕಾಣಿ ಯಾರು ಹಿಡಿಯಬೇಕು ಎಂಬುದನ್ನು ನಿರ್ಧರಿಸಲು ಇದು ಸಕಾಲವಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.