ADVERTISEMENT

‘ಜಂತಕಲ್ ಗಣಿ ಹಗರಣದ ಉರುಳು ಸಿ.ಎಂ ಕೊರಳಿಗೆ’

​ಪ್ರಜಾವಾಣಿ ವಾರ್ತೆ
Published 4 ಜೂನ್ 2018, 20:07 IST
Last Updated 4 ಜೂನ್ 2018, 20:07 IST

ಸಾಗರ: ‘ನ್ಯಾಯಾಲಯದ ಎದುರು ಇರುವ ಜಂತಕಲ್ ಗಣಿ ಹಗರಣದ ಉರುಳು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕೊರಳಿಗೆ ಬೀಳಲಿದೆ. ಈ ಹಗರಣವೊಂದೇ ಮುಖ್ಯಮಂತ್ರಿ ಕುರ್ಚಿಯನ್ನು ಅಲುಗಾಡಿಸಲಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದರು.

ಇಲ್ಲಿನ ವಿಧಾನಸಭಾ ಕ್ಷೇತ್ರದ ಮತದಾರರಿಗೆ, ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕುಮಾರಸ್ವಾಮಿ ಅವರು ನಡೆಸಿರುವ ಭ್ರಷ್ಟಾಚಾರದ ಅನೇಕ ಹಗರಣಗಳ ಬಗ್ಗೆ ನನಗೆ ಮಾಹಿತಿ ಇದೆ. ಸೂಕ್ತ ಸಂದರ್ಭದಲ್ಲಿ ಅವುಗಳನ್ನು ಬಹಿರಂಗಪಡಿಸುತ್ತೇನೆ’ ಎಂದು ಮಾಹಿತಿ ನೀಡಿದರು.

‘ಇನ್ನು 20ರಿಂದ 25 ದಿನ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡುವುದಿಲ್ಲ. ಸಂಪುಟ ವಿಸ್ತರಣೆ ನಂತರ ರೈತರ ಸಾಲ ಮನ್ನಾ ಸೇರಿ ಹಲವು ವಿಷಯಗಳ ಕುರಿತು ಸರ್ಕಾರದ ಮೂಗು ಹಿಡಿಯುತ್ತೇನೆ’ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.