ಬೆಳಗಾವಿ: ಜಾರಕಿಹೊಳಿ ಕುಟುಂಬದ ಮೂವರೂ ಸಹೋದರರು ಗೆಲುವು ಸಾಧಿಸುವ ಮೂಲಕ ಜಯದ ಯಾತ್ರೆಯನ್ನು ಮುಂದುವರೆಸಿದ್ದಾರೆ.
ಗೋಕಾಕ ಕ್ಷೇತ್ರದಿಂದ ಸಚಿವ ರಮೇಶ ಜಾರಕಿಹೊಳಿ, ಯಮಕನಮರಡಿ ಕ್ಷೇತ್ರದಿಂದ ಸತೀಶ ಜಾರಕಿಹೊಳಿ ಹಾಗೂ ಅರಭಾವಿ ಕ್ಷೇತ್ರದಿಂದ ಬಾಲಚಂದ್ರ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ನಿಂದ ಐದನೇ ಬಾರಿಗೆ ರಮೇಶ ಜಾರಕಿಹೊಳಿ, ಬಿಜೆಪಿಯಿಂದ ಬಾಲಚಂದ್ರ ಜಾರಕಿಹೊಳಿ ಸತತ ಐದನೇ ಬಾರಿಗೆ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ನಿಂದ ಸತೀಶ ಜಾರಕಿಹೊಳಿ ಮೂರನೇ ಗೆಲುವು ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.