ADVERTISEMENT

‘ಜೆಡಿಎಸ್‌ ಕಾರ್ಯಕರ್ತರಿಗೆ ಹೊಡೆಯಿರಿ’

​ಪ್ರಜಾವಾಣಿ ವಾರ್ತೆ
Published 26 ಮೇ 2018, 19:30 IST
Last Updated 26 ಮೇ 2018, 19:30 IST

ಪಿರಿಯಾಪಟ್ಟಣ: ‘ಜೆಡಿಎಸ್ ಕಾರ್ಯಕರ್ತರನ್ನು ಹುಚ್ಚು ನಾಯಿಗೆ ಹೊಡೆಯುವಂತೆ ಅಟ್ಟಾಡಿಸಿ ಹೊಡೆಯಿರಿ, ನಿಮ್ಮ ರಕ್ಷಣೆಗೆ ನಾನು ಇದ್ದೇನೆ’ ಎಂದು ಮಾಜಿ ಶಾಸಕ ಕೆ.ವೆಂಕಟೇಶ್‌ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರೆ ಕೊಟ್ಟಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಪಟ್ಟಣದಲ್ಲಿ ಈಚೆಗೆ ಏರ್ಪಡಿಸಿದ್ದ ಕಾಂಗ್ರೆಸ್ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.

‘ವೆಂಕಟೇಶ್‌ ಹೇಳಿಕೆಯಿಂದ ಜೆಡಿಎಸ್‌ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಸುಮ್ಮನಿದ್ದಾರೆ. ಇಂಥ ಹೇಳಿಕೆ ನೀಡುವುದು ಸರಿಯಲ್ಲ’ ಎಂದು ಜೆಡಿಎಸ್ ಮುಖಂಡ ಎಸ್.ರಾಮು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.