ADVERTISEMENT

ಜೆಡಿಎಸ್ ಸಮಾವೇಶ: ನೀತಿ ಸಂಹಿತೆ ಉಲ್ಲಂಘನೆ ಆರೋಪ; ಬಸ್‌ಗಳು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2018, 12:15 IST
Last Updated 12 ಏಪ್ರಿಲ್ 2018, 12:15 IST
ಜೆಡಿಎಸ್ ಸಮಾವೇಶ: ನೀತಿ ಸಂಹಿತೆ ಉಲ್ಲಂಘನೆ ಆರೋಪ; ಬಸ್‌ಗಳು ವಶಕ್ಕೆ
ಜೆಡಿಎಸ್ ಸಮಾವೇಶ: ನೀತಿ ಸಂಹಿತೆ ಉಲ್ಲಂಘನೆ ಆರೋಪ; ಬಸ್‌ಗಳು ವಶಕ್ಕೆ   

ರಾಮನಗರ: ನೀತಿ ಸಂಹಿತೆ ಉಲ್ಲಂಘನೆಯ ಆರೋಪದ‌ ಮೇಲೆ 10ಕ್ಕೂ ಹೆಚ್ಚು ಬಸ್‌ಗಳನ್ನು ಚುನಾವಣಾ‌ ಅಧಿಕಾರಿಗಳು ಗುರುವಾರ ಇಲ್ಲಿ ವಶಕ್ಕೆ ಪಡೆದರು.

ಕೆಎಂಎಫ್ ಅಧ್ಯಕ್ಷ ಪಿ‌‌. ನಾಗರಾಜು ಅವರು ಜೆಡಿಎಸ್ ವರಿಷ್ಠ ಎಚ್.ಡಿ.‌ದೇವೇಗೌಡ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.‌

ಕಾರ್ಯಕ್ರಮಕ್ಕೆ ಖಾಸಗಿ ಬಸ್‌ಗಳಲ್ಲಿ ಜನರನ್ನು ಕರೆ ತರಲಾಗಿತ್ತು. ಆದರೆ, ಇದಕ್ಕೆ ಅನುಮತಿ‌ ಪಡೆದಿರಲಿಲ್ಲ.‌ ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಸ್‌ಗಳನ್ನು ವಶಕ್ಕೆ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.