ADVERTISEMENT

ತಾಕತ್ತಿದ್ದರೆ ಸಿದ್ದರಾಮಯ್ಯ ಗೆದ್ದು ತೋರಿಸಲಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2018, 19:30 IST
Last Updated 6 ಮಾರ್ಚ್ 2018, 19:30 IST
ತಾಕತ್ತಿದ್ದರೆ ಸಿದ್ದರಾಮಯ್ಯ ಗೆದ್ದು ತೋರಿಸಲಿ
ತಾಕತ್ತಿದ್ದರೆ ಸಿದ್ದರಾಮಯ್ಯ ಗೆದ್ದು ತೋರಿಸಲಿ   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಇಲ್ಲಿ ಮಂಗಳವಾರ ಸವಾಲು ಹಾಕಿದರು.

‘ಭ್ರಷ್ಟಾಚಾರದ ವಿಚಾರದಲ್ಲಿ ಸಿದ್ದರಾಮಯ್ಯ ಬಳಿ ಯಾವುದೇ ಬಹಿರಂಗ ಚರ್ಚೆಗೆ ಹೋಗುವುದಿಲ್ಲ. ನನ್ನೊಂದಿಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಅವರ ಹಗರಣಗಳ ಪಟ್ಟಿಯನ್ನು ಎಲ್ಲರಿಗೂ ಹಂಚಲಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

‘ಸಾವಿರಾರು ಎಕರೆ ಲೂಟಿ ಮಾಡಿ ಜನರಿಗೆ ದ್ರೋಹ ಬಗೆದಿರುವ ಅಶೋಕ ಖೇಣಿ ಎಂಬ ಭ್ರಷ್ಟನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಲೂಟಿಕೋರರು ಮತ್ತು ಹಗಲು ದರೋಡೆಕೋರರು ಮಾತ್ರ ಪಕ್ಷದಲ್ಲಿರಬಹುದು ಎಂಬುದನ್ನು ಕಾಂಗ್ರೆಸ್‌ ತೋರಿಸಿದೆ’ ಎಂದು ವ್ಯಂಗ್ಯವಾಡಿದರು.

ADVERTISEMENT

ನಟ ಉಪೇಂದ್ರ ಬಿಜೆಪಿ ಸೇರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಸ್ಪಷ್ಟಪಡಿಸಿದರು.

ಹೊಸಮಠಕ್ಕೆ ಭೇಟಿ: ಯಡಿಯೂರಪ್ಪ ಅವರು ಮೈಸೂರಿನ ಹೊಸಮಠದ ಚಿದಾನಂದ ಸ್ವಾಮೀಜಿಯನ್ನು ಭೇಟಿಯಾಗಿ ಚರ್ಚಿಸಿದರು. ‘ಮಠದಲ್ಲಿ ಉಪಾಹಾರಕ್ಕೆ ಕರೆದಿದ್ದರು. ಅದಕ್ಕೆ ಇಲ್ಲಿಗೆ ಭೇಟಿ ನೀಡಿದ್ದೇನೆ. ನನಗೆ ಹಾಗೂ ಪಕ್ಷದ ಇತರ ನಾಯಕರಿಗೆ ಸ್ವಾಮೀಜಿಗಳ ಆಶೀರ್ವಾದ ಪಡೆಯುವ ಅವಕಾಶ ಲಭಿಸಿತು’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.